ಚಿತ್ರದುರ್ಗ: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆ ವಿಸ್ತರಣೆ, ಮಣ್ಣು ಮತ್ತು ನೀರು ಸಂರಕ್ಷಣೆಗೆ ಸಂಬಂಧಿಸಿದ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಿ ಸಹಾಯಧನ ಪಡೆಯಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ತೋಟಗಾರಿಕೆ ಬೆಳೆಗಳಾದ ತೆಂಗು, ಮಾವು, ಸಪೋಟ, ದಾಳಿಂಬೆ, ಸೀಬೆ, ನಿಂಬೆ, ಹುಣಸೆ, ನುಗ್ಗೆ, ನೇರಳೆ, ಕಾಳುಮೆಣಸು, ಸೀತಾಫಲ, ನೆಲ್ಲಿ, ಗುಲಾಬಿ ಹೂ ಮತ್ತು ಮಲ್ಲಿಗೆ ಹೂ ಪ್ರದೇಶ ಅಭಿವೃದ್ಧಿ ಪಡಿಸುವುದು, ತೆಂಗು ಪುನಃಶ್ಚೇತನ, ಮಾವು ಪುನಃಶ್ಚೇತನ, ಕೊಳವೆಬಾವಿ ಮರುಪೂರಣ, ಬದು ನಿರ್ಮಾಣ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು. ಬಿಪಿಎಲ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅವಕಾಶ ಒದಗಿಸಲಾಗಿದೆ.
ಆಸಕ್ತರು ಸಂಬಂಧಪಟ್ಟ ತಾಲ್ಲೂಕು ಕಚೇರಿಯಲ್ಲಿ ನರೇಗಾ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕಿನ ಸಹಾಯವಾಣಿ ಸಂಪರ್ಕಿಸಬಹುದು.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ 08194-231480, ಚಳ್ಳಕೆರೆ 08195-250432, ಹಿರಿಯೂರು 08193-260305, ಹೊಳಲ್ಕೆರೆ 08191-276370, ಹೊಸದುರ್ಗ 08197-230790, ಮೊಳಕಾಲ್ಮುರು 08198-229080 ಕ್ಕೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments!
There are no comments yet, but you can be first to comment this article.