ನವದೆಹಲಿ: ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ.
ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಎಲ್ಲ ಸಹಕಾರಿ ಬ್ಯಾಂಕುಗಳು ಇನ್ನು ಮುಂದೆ ರಿಸರ್ವ್ ಬ್ಯಾಂಕ್ ಅಡಿಯಲ್ಲಿ ತರುವ ಕುರಿತು ಈ ಹಿಂದೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಕುರಿತಂತೆ ನಡೆದಿದ್ದ ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಷ್ಟ್ರಪತಿ ಅಂಕಿತ ಬಿದ್ದಿದೆ.
No comments!
There are no comments yet, but you can be first to comment this article.