ದಾವಣಗೆರೆ: ಜಿಲ್ಲೆಯಲ್ಲಿ ಎಷ್ಟೇ ಕೇಸ್ ಬಂದರೂ ನಿಭಾಯಿಸುವ ವ್ಯವಸ್ಥೆ ಇದೆ. ಮನೆಮನೆಗೆ ಹೋಗಿ ಸೋಂಕಿತರನ್ನು ಬೇಗ ಪತ್ತೆ ಹಚ್ಚಿ, ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕೆಲಸ ಆಗಬೇಕಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಗುತ್ತಿರುವ ಸಾವಿನ ಪ್ರಮಾಣ ನಮ್ಮ ಕಾರ್ಯದಕ್ಷತೆಯನ್ನು ಪ್ರಶ್ನಿಸುವಂತಿದೆ. ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಮಾರ್ಗೋಪಾಯಗಳೇನು ಎಂಬ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದರು.
No comments!
There are no comments yet, but you can be first to comment this article.