ಬೆಂಗಳೂರು : ಜಾತಿ ಆಧಾರದಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿಲ್ಲ ಎಂದು ಶಾಸಕ ಮುರುಗೇಶ್ ನಿರಾಣಿ ಹೇಳಿದ್ದಾರೆ. ಈ ಹಿಂದೆಯು ಸಚಿವನಾಗಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನನಗೆ ನೀಡಿದ್ದ ಖಾತೆಯನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ.
ಹೀಗಾಗಿ ನನಗೆ ಮಂತ್ರಿ ಸ್ಥಾನವನ್ನು ನೀಡಿದ್ದಾರೆ. ನನಗೆ ಯಾವುದೇ ಖಾತೆಯನ್ನು ಕೊಟ್ಟರೂ ನಿಭಾಯಿಸುತ್ತೇನೆ. ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನನಗೆ ಯಾವುದೇ ಖಾತೆಯನ್ನು ಕೊಟ್ಟರೂ ನಿಭಾಯಿಸುತ್ತೇನೆ ಎಂದ ಶಾಸಕ ಮುರುಗೇಶ್ ನಿರಾಣಿ

No comments!
There are no comments yet, but you can be first to comment this article.