ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಅನ್ನು ಹಣಕಾಸು ಖಾತೆಹೊಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಡನೆ ಮಾಡಿದ್ದಾರೆ. ಇದೇ ವೇಳೆ ಬಜೆಟ್ ನ ಹೈಲೈಟ್ಸ್ .
ನಮ್ಮ ಮೆಟ್ರೋ 3ನೇ ಹಂತದ ವಿಸ್ತರಣೆ. ಜೆ.ಪಿ.ನಗರದಿಂದ ಕೆ.ಆರ್.ಪುರಂ 42.75 ಕಿ.ಮೀ, ಟೋಲ್ ಗೇಟ್ನಿಂದ ಕಡಬಗೆರೆ 12.5 ಕಿ.ಮೀ, ಗೊಟ್ಟಿಗೆರೆಯಿಂದ ಬಸವಪುರ 3.07 ಕಿ.ಮೀ, ಹೆಗಡೆ ನಗರದಿಂದ ಏರೋಸ್ಪೇಸ್ ಪಾರ್ಕ್ 18.95 ಕಿ.ಮೀ, ಕೋಗಿಲು ಕ್ರಾಸ್ನಿಂದ ರಾಜಾನುಕುಂಟೆ 10.6. ಕಿ.ಮೀ ಹಾಗೂ ಇಬ್ಬಲೂರಿನಿಂದ ಕರ್ಮಲ್ ರಾಮ್ 6.67 ಕಿ.ಮೀ, ಒಟ್ಟು 95 ಕಿ.ಮೀ ಮೆಟ್ರೊ ವಿಸ್ತರಣೆಗೆ ಸಮ್ಮತಿ.
ಏಳು ಜಿಲ್ಲೆಯಲ್ಲಿ ಕೈಗಾರಿಕಾ ತರಬೇತಿಗೆ 500 ಕೋಟಿ ಮೀಸಲು.
ಬಳ್ಳಾರಿ ಜಿಲ್ಲೆಯಲ್ಲಿ ವಸ್ತ್ರ ಉದ್ಯಮಕ್ಕೆ ಆದ್ಯತೆ. ತುಮಕೂರಿನಲ್ಲಿ ಸ್ಪೋರ್ಟ್ಸ್ ಮತ್ತು ಫಿಟ್ನೆಸ್ ವಸ್ತುಗಳ ಉತ್ಪಾದನಾ ಘಟಕ ಸ್ಥಾಪನೆ. 4 ವರ್ಷದಲ್ಲಿ 2000 ಕೋಟಿ ಬಂಡವಾಳ ಹೂಡಿಕೆ ಉದ್ದೇಶ. ಇದರಿಂದ 1 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ.
ದಿವ್ಯಾಂಗರಿಗೆ ಶೇ.3ರಷ್ಟು ಮೀಸಲಾತಿ. ಆನ್ಲೈನ್ನಲ್ಲೇ ಅರ್ಜಿ ಪಡೆದು ದಿವ್ಯಾಂಗರಿಗೆ ಮನೆ ಹಂಚಿಕೆ.
ಧಾರವಾಡ, ಕಲಬುರಗಿ, ಮೈಸೂರಿನಲ್ಲಿ 3 ಘನೀಕೃತ ವೀರ್ಯನಳಿಕೆಗಳ ವಿತರಣಾ ಕೇಂದ್ರ ಸ್ಥಾಪನೆ, 2.25 ಕೋಟಿ ವೆಚ್ಚದಲ್ಲಿ 3 ಘನೀಕೃತ ವೀರ್ಯನಳೀಕೆಗಳ ವಿತರಣಾ ಕೇಂದ್ರ ಸ್ಥಾಪನೆ, 3 ಕೋಟಿ ವೆಚ್ಚದಲ್ಲಿ ಜಲಕೃಷಿ ವಿಧಾನದಿಂದ ಹಸಿರು ಮೇವು ಉತ್ಫಾದನಾ ಘಟಕ ಸ್ಥಾಪನೆ
ಮೈಸೂರು ಜಿಲ್ಲೆಯಲ್ಲಿ ICB ಚಿಪ್ ತಯಾರಿಕಾ ಸಂಸ್ಥೆ ಸ್ಥಾಪನೆ. ಬೀದರ್ ಜಿಲ್ಲೆಯಲ್ಲಿ ಕೃಷಿ ಹೊಸ ತಂತ್ರಜ್ಞಾನ ಯಂತ್ರಗಳ ಘಟಕ ಸ್ಥಾಪನೆ. ಈ ಯೋಜನೆಗಳ ಅನುಷ್ಠಾನಕ್ಕೆ ವಿಶೇಷ ತರಬೇತಿ. ಪ್ರತಿ ಜಿಲ್ಲೆಯಲ್ಲಿ 6 ತಿಂಗಳಿನಿಂದ 2 ವರ್ಷದವರೆಗೆ ತರಬೇತಿ. ಬಂಡವಾಳ ಹೂಡುವ ಕಂಪನಿಗಳಿಗೆ 2000 ಕೋಟಿ ನೆರವು ನೀಡಲಾಗಿದೆ.
No comments!
There are no comments yet, but you can be first to comment this article.