ಶಾರ್ಜಾ: ಹೈದರಾಬಾದ್ ವಿರುದ್ಧ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಅಂದ ಹಾಗೇ ಇಂದಿನ ಪಂದ್ಯದಲ್ಲಿ ಮುಂಬೈ, ಪಂಜಾಬ್ ವಿರುದ್ಧ ಆಡಿಸಿದ್ದ ತಂಡವನ್ನೇ ಕಣಕ್ಕಿಳಿಸುತ್ತಿದೆ. ಆದರೆ ದರಾಬಾದ್ ತಂಡ ಎರಡು ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಗಾಯಾಳು ಭುವನೇಶ್ವರ್ ಬದಲು ಸಿದ್ದಾರ್ಥ್ ಕೌಲ್ ಹಾಗೂ ಖಲೀಲ್ ಅಹ್ಮದ್ ಬದಲು ಸಂದೀಪ್ ಶರ್ಮಾರನ್ನು ಆಯ್ಕೆಮಾಡಿಕೊಂಡಿದೆ.
ಉಭಯ ತಂಡಗಳ ಆಟಗಾರರ ವಿವರ :
ಮುಂಬೈ: ರೋಹಿತ್ ಶರ್ಮ (ನಾಯಕ), ಕ್ವಿಂಟನ್ ಡಿಕಾಕ್ (ವಿಕೀ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೈರಾನ್ ಪೊಲ್ಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
ಸನ್ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಜಾನಿ ಬೇರ್ಸ್ಟೋ (ವಿಕೀ), ಮನೀಷ್ ಪಾಂಡೆ, ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಪ್ರಿಯಂ ಗಾರ್ಗ್, ಅಭಿಷೇಕ್ ಶರ್ಮ, ರಶೀದ್ ಖಾನ್, ಸಿದ್ದಾರ್ಥ್ ಕೌಲ್,ಸಂದೀಪ್ ಶರ್ಮ, ಟಿ.ನಟರಾಜನ್.
No comments!
There are no comments yet, but you can be first to comment this article.