ಬಾಗಲಕೋಟೆ: ಮಾಜಿ ಸಚಿವೆ ನಟಿ ಉಮಾಶ್ರೀ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಬಾಗಲಕೋಟೆ ಪೊಲೀಸರು ಒಂದೇ ವಾರದಲ್ಲಿ ಖದೀಮರನ್ನು ಸೆರೆ ಹಿಡಿದಿದ್ದಾರೆ. ಯಲ್ಲಪ್ಪಗಡ್ಡಿ, ದುರ್ಗಪ್ಪ ವಾಲ್ಮೀಕಿ ಬಂಧಿತ ಆರೋಪಿಗಳು.
ನವೆಂಬರ್ 2 ರಂದು ಉಮಾಶ್ರೀರವರ ಮನೆಯಲ್ಲಿ ಕಳ್ಳತನವಾಗಿತ್ತು. ಅವರು ಈ ಕುರಿತು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 1,94000 ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
No comments!
There are no comments yet, but you can be first to comment this article.