ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರ್ಜುನ್ ಜನ್ಯ ಅವರು, “ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ” ಎಂದು ತಿಳಿಸಿದ್ದಾರೆ.
ಅರ್ಜುನ್ ಜನ್ಯ ಅವರಿಗೆ ಕಳೆದ ವರ್ಷ ಹೃದಯಾಘಾತ ಆಗಿದ್ದು ಅಭಿಮಾನಿಗಳಿಗೆ ಶಾಕ್ ನೀಡಿದಂತಾಗಿತ್ತು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡಿದ್ದರು.