LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಈ ಕಾರಣಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣರ ರಾಜೀನಾಮೆಗೆ ಆಗ್ರಹಿಸಿ ಮನವಿ.!

ಈ ಕಾರಣಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣರ ರಾಜೀನಾಮೆಗೆ ಆಗ್ರಹಿಸಿ ಮನವಿ.!

ಈ ಕಾರಣಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣರ ರಾಜೀನಾಮೆಗೆ ಆಗ್ರಹಿಸಿ ಮನವಿ.!

ಚಿತ್ರದುರ್ಗ : ಮೊಳಕಾಲ್ಮುರು ತಾಲ್ಲೂಕನ್ನು ಆಂಧ್ರ ಪ್ರದೇಶಕ್ಕೆ ಸೇರಿಸಿ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಎನ್.ವೈ.ಗೋಪಾಲಕೃಷ್ಣರವರು ಕೂಡಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಜಿಲ್ಲೆಯ ಜನರ ಕ್ಷಮೆ ಕೇಳುವಂತೆ ಯುವ ಕರ್ನಾಟಕ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಏಳು ಬಾರಿ ಶಾಸಕರಾಗಿರುವ ಎನ್.ವೈ.ಗೋಪಾಲಕೃಷ್ಣ ತಾವು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವುದನ್ನು ಮರೆತು ಮತದಾರರಿಗೆ ಅವಮಾನವಾಗುವಂತ ಹೇಳಿಕೆ ನೀಡಿ ಕನ್ನಡ ನಾಡು, ನುಡಿ, ನೆಲ, ಜಲಕ್ಕೆ ಅಗೌರವ ತೋರುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಕೂಡಲೆ ರಾಜಿನಾಮೆ ಪಡೆಯಬೇಕು. ಇಲ್ಲವೇ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ರವಿಕುಮಾರ್ನಾಯ್ಕ, ಕಾರ್ಯದರ್ಶಿ ಓಬಣ್ಣ ಎನ್, ಉಪಾಧ್ಯಕ್ಷ ನವೀನ್, ಕಾರ್ಯಾಧ್ಯಕ್ಷ ಎಚ್.ಮಣಿಕಂಠ, ರೈತ ಸಂಘದ ಅಧ್ಯಕ್ಷ ಸಿದ್ದೇಶ್, ಸಚಿನ್, ಪ್ರಕಾಶ್, ಮಂಜುನಾಥ ಎಂ.ಎಚ್, ಎಸ್.ನಾಗರಾಜ್, ರೇಣುಕೇಶ್, ಅಣ್ಣಪ್ಪ, ನಾಗಣ್ಣ ಜಾಲಿಕಟ್ಟೆ, ರಘುನಾಥ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST