LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿಗಳು, ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

2026-27ನೇ ಸಾಲಿನ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, 2025ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಹಾಗೂ ನಗದು ಪುರಸ್ಕಾರಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದರೊಂದಿಗೆ 2025-26ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಹಾಗೂ 2026-27ನೇ ಸಾಲಿನ ಗುರಿ-ಒಲಂಪಿಕ್ ಪದಕ ಮತ್ತು ಶೈಕ್ಷಣಿಕ ಶುಲ್ಕ ಮರುಪಾವತಿ ಸೌಲಭ್ಯಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ಸರ್ಕಾರದ ಅಧಿಕೃತ ಸೇವಾಸಿಂಧು ಜಾಲತಾಣದ https://sevasindhu.karnataka.gov.in  ಮೂಲಕ ಆನ್‍ಲೈನ್‍ನಲ್ಲಿ ಜುಲೈ 31ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-235635 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

(AI ಚಿತ್ರ )

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇವಲ ಅರಳಿ ಮರವನ್ನು ಮುಟ್ಟುತ್ತಾ ಈ ಚಿಕ್ಕ ಮಂತ್ರ ಹೇಳಿದರೆ ಯಾವುದೇ ಇಚ್ಛೆ ಇದ್ದರೂ ಈಡೇರುತ್ತದೆ..!ಏಳು ಜನ ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ.! ಹೆಚ್ಚುವರಿ ಜವಾಬ್ದಾರಿಚಿತ್ರದುರ್ಗ: ನಾಳೆ  ಜಿಟಿಟಿಸಿ: ಜುಲೈ 22ರಂದು ಉದ್ಯೋಗ ಮೇಳಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-07-2026ವಚನ.: --ಸಿದ್ಧರಾಮೇಶ್ವರಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ:  -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್ಈ ಕಾರಣಕ್ಕೆ ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ ಶೇ.80ರಷ್ಟು ಸಿಬ್ಬಂದಿ ವರ್ಗಾವಣೆ.!ದೃಷ್ಟಿ ನರಘೋಷ ಮಹಾನಿವಾರಣ ಯಂತ್ರದ ಮಹತ್ವವೇನು ಯಂತ್ರದಿಂದ ನರ ದೃಷ್ಟಿ ದೋಷ ಶತ್ರು ದೃಷ್ಟಿ ದೋಷ ಹೇಗೆ ಪರಿಹಾರ!?ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ವಿಪಕ್ಷಗಳ ಲೆಕ್ಕಾಚಾರ ಏನು.?