LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಸಿಇಟಿ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ.!

ಸಿಇಟಿ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ.!

 

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿ ಸಿಇಟಿ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ.

ಸಿಇಟಿ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆಗೆ ಆ.25ರಿಂದ 28ರವರೆಗೆ ಸಮಯ ನಿಗದಿ ಮಾಡಲಾಗಿದೆ. ಈ ಅವಧಿಯಲ್ಲಿ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಿ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬೇಕು.

ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ. ಎಸ್ ಸಿ. (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಕ್ಕೆ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಇಷ್ಟ ಇದ್ದರೆ ಚಾಯ್ಸ್- 1 ಆಯ್ಕೆ ಮಾಡಿಕೊಂಡು ಶುಲ್ಕ ಪಾವತಿಸಿ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದು ಅಥವಾ ಸಿಕ್ಕಿರುವ ಸೀಟು ಇಷ್ಟ ಇಲ್ಲ ಎನ್ನುವವರು ಚಾಯ್ಸ್- 4 ಆಯ್ಕೆ ಮಾಡಿಕೊಂಡು ಕೌನ್ಸೆಲಿಂಗ್ ಪ್ರಕ್ರಿಯೆಯಿಂದ ಹೊರ ಹೋಗಬಹುದು.

UGNEET-26: MCC ಅಲ್ಲದೆ ಇತರ ರಾಜ್ಯಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಸೀಟು ಪಡೆದಿರುವ ಅಭ್ಯರ್ಥಿಗಳಿಗೆ ಕೆಇಎ ಕೌನ್ಸೆಲಿಂಗ್ ನಿಂದ ಉಚಿತವಾಗಿ ಹೊರ ಹೋಗುವುದಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಅಂತಹವರಿಂದ ತೆರವಾಗುವ ಸೀಟುಗಳನ್ನೂ ಸೇರಿಸಿಕೊಂಡು ಮತ್ತೊಮ್ಮೆ ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತದೆ.

ವೈದ್ಯಕೀಯ ಕೋರ್ಸ್ ಗಳ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ. ಕೆಲವು ಅಭ್ಯರ್ಥಿಗಳು KEA ನಲ್ಲೂ ಹಾಗೂ MCC ನಡೆಸುವ ಕೌನ್ಸೆಲಿಂಗ್ ನಲ್ಲೂ ಸೀಟು ಪಡೆದಿದ್ದು, ಅಂತಹವರು ಇಚ್ಛಿಸಿದಲ್ಲಿ ಚಾಯ್ಸ್-4 ಆಯ್ಕೆ ಮಾಡಿಕೊಂಡು ಕೆಇಎ ಕೌನ್ಸೆಲಿಂಗ್ ನಿಂದ ಉಚಿತವಾಗಿ ಹೊರ ಹೋಗುವುದಕ್ಕೆ ಅವಕಾಶ ನೀಡಲಾಗಿದೆ.

ಆ.25 ಮತ್ತು 26ರಂದು ನಿರ್ಗಮಿಸುವುದಕ್ಕೆ ಸಮಯ ನೀಡಿದ್ದು, ಇದರಿಂದ ಮೊದಲ ಸುತ್ತಿನಲ್ಲಿ ಮೆರಿಟ್ ಅಭ್ಯರ್ಥಿಗಳಿಗೂ ಇಚ್ಛೆಯನುಸಾರ ಸೀಟು ಲಭ್ಯವಾದಂತಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ಬೆಳೆಸಿದರೆ ಮನೆಯಲ್ಲಿರುವ ಎಲ್ಲಾ ಸದಸ್ಯರ ಅದೃಷ್ಟವೇ ಬದಲಾಗುತ್ತದೆ ಸಂತೋಷದ ಜೀವನ ನಿಮ್ಮದಾಗುತ್ತದೆ!ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ..!ಸಿಇಟಿ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ.!ಬಿಜೆಪಿ. ವಿರುದ್ದ ಜಿಲ್ಲಾ ಕಾಂಗ್ರೆಸ್ ನಾಯಕರ ಪಂಜಿನ ಮೆರವಣಿಗೆಈ ಕಾರಣಕ್ಕೆ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ.!25-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.: -ಸಿದ್ಧಾಂತಿ ವೀರಸಂಗಯ್ಯ.!ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ.!ಅದ್ದೂರಿ ಮದಕರಿ ನಾಯಕ ಜಯಂತ್ಯುತ್ಸವ: ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ.!  ದೇಶದಲ್ಲಿ ಅರಾಜಕತೆ ಸೃಷ್ಟಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಸಂಸದ ಕಾರಜೋಳ ಆರೋಪ