-ದಸರಯ್ಯ ಅವರ ವಚನ.!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಎಲ್ಲವನರಿದಲ್ಲಿ,
ಕಡೆಯಲ್ಲಿ ಕೊಲ್ಲಬೇಕೆಂಬುದೊಂದು ವೇದ ಉಂಟೆ?
ಶಾಸ್ತ್ರವನೆಲ್ಲವ ಕಲಿತಲ್ಲಿ ಗೆಲ್ಲ ಸೋಲಕ್ಕೆ
ಹೋರಬೇಕೆಂದು ಕಡೆಯಲ್ಲಿ ಒಂದು ಸೊಲ್ಲುಂಟೆ?
ಪುರಾಣವನ್ನೆಲ್ಲವನೋದಿದಲ್ಲಿ ಸರ್ವಜೀವವ
ಕೊಲ್ಲು ಕೊರೆ ಎಂಬುದೊಂದು ದಳ್ಳುರಿಯುಂಟೆ?
ಶ್ರುತಿಯ ಕೇಳುವಲ್ಲಿ ಸ್ಮೃತಿಯನಂಗೀಕರಿಸುವಲ್ಲಿ
ಸರ್ವಹತವ ಮಾಡಬೇಕೆಂಬುದೊಂದು ಗತಿಯುಂಟೆ?
ಇಂತೀ ಆತ್ಮನಲ್ಲಿ ಸರ್ವಭೂತ ಹಿತವುಳ್ಳಂಗೆಆತ ಅತೀತ ಸ್ವಯವಸ್ತು ದಸರೇಶ್ವರಲಿಂಗವು.
-ದಸರಯ್ಯ