ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಮತ್ತು ಆರ್.ಎಸ್.ಎಸ್. ಕಟ್ಟಾಳು ಬಿ.ಸಿ. ನಾಗೇಶ್ ಅವರು ಮಂಗಳವಾರ ಬೆಂಗಳೂರಿನ ಜಯನಗರದ ಪುತ್ರಿಯ ಮನೆಯಲ್ಲಿ ನಿಧನರಾಗಿದ್ದಾರೆ.
ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದಿಂದ 2008 ಮತ್ತು 2018ರಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದ ನಾಗೇಶ್ ಅವರು ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗಲಿ ನಿಧನರಾಗಿದ್ದಾರೆ. ಬುಧವಾರ ತಿಪಟೂರಿನಲ್ಲಿ ಅಂತ್ಯ ಕ್ರಿಯೆ ನೆರವೇರಲಿದೆ.
ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರಿಗೆ ಎರಡು ಸಲ ಆಪರೇಷನ್ ಆಗಿತ್ತು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ.