ಸರ್ಕಾರದಿಂದ ಪಿಂಚಣಿದಾರರಿಗೆ ಗುಡ್ ನ್ಯೂಸ್..!
ಬೆಂಗಳೂರು: ರಾಜ್ಯದಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಕಂದಾಯ ಇಲಾಖೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ.
ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ದಾಖಲೆ ಪರಿಶೀಲನೆ ಬಳಿಕ ಈ ವ್ಯಾಪ್ತಿಗೆ ಬರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಪಿಂಚಣಿಯನ್ನು ಯಥಾವತ್ತಾಗಿ ಮುಂದುವರಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇದರಿಂದ ನೂರಾರು ಮಂದಿಗೆ ಸಹಾಯವಾಗಲಿದೆ.