ದಾವಣಗೆರೆ : ಹಿಂದುಳಿದ ವರ್ಗಗಳ ಇಲಾಖೆಯಿಂದ ವಕೀಲರಿಗೆ ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಪ್ರಸಕ್ತ ಸಾಲಿಗೆ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಠಡಿ 46, ಎರಡನೇ ಮಹಡಿ, ಜಿಲ್ಲಾಡಳಿತ ಭವನ ಕರೂರು ರಸ್ತೆ, ದಾವಣಗೆರೆ ಇಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 5 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.