LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳಿಗೆ ಅರ್ಜಿ ಆಹ್ವಾನ.!

 

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯು 2026ನೇ ಸಾಲಿನ ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ.

ಅರಣ್ಯ ಇಲಾಖೆಯಲ್ಲಿ ಒಟ್ಟು 750 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ರಾಜ್ಯದ ಯುವಕರಿಗೆ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಲು ಇದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ, ಎಸ್.ಎಸ್.ಎಲ್.ಸಿ ಅಂಕಗಳ ಆಧಾರದ ಮೇಲೆ ನೇರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ICSE, CBSE, NIOS ವತಿಯಿಂದ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಹರಾಗಿರುವುದಿಲ್ಲ.

ಆಯ್ಕೆ ಪ್ರಕ್ರಿಯೆಯು ಪ್ರಮುಖವಾಗಿ ಮೂರು ಹಂತಗಳನ್ನು ಒಳಗೊಂಡಿದೆ.

ಎಸ್.ಎಸ್.ಎಲ್.ಸಿ ಮೆರಿಟ್ ಆಧಾರಿತ ಶಾರ್ಟ್‌ಲಿಸ್ಟ್: ಎಸ್.ಎಸ್.ಎಸ್.ಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:20 ಅನುಪಾತದಲ್ಲಿ ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆಗೆ (ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ – PST) ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳು: ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ (PST), ದೈಹಿಕ ಸಹಿಷ್ಣುತೆ ಪರೀಕ್ಷೆ (ಫಿಸಿಕಲ್ ಎಂಡ್ಯೂರೆನ್ಸ್ ಟೆಸ್ಟ್ – PET) ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಅಂತಿಮ ಆಯ್ಕೆ: ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ SSLC ಅಂಕಗಳ ಆಧಾರದ ಮೇಲೆ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ, ನೇಮಕಾತಿ ಆದೇಶ ನೀಡಲಾಗುತ್ತದೆ. ಮೂಲ ದಾಖಲಾತಿ ಪರಿಶೀಲನೆಯು ಅಂತಿಮ ಹಂತವಾಗಿರುತ್ತದೆ.

ಮಾನದಂಡಗಳು:

ಪುರುಷ ಅಭ್ಯರ್ಥಿಗಳು: ಕನಿಷ್ಠ ಎತ್ತರ 163 ಸೆಂ.ಮೀ. ಎದೆ ಸುತ್ತಳತೆ 79 ಸೆಂ.ಮೀ. (ಸಾಮಾನ್ಯ ಸ್ಥಿತಿಯಲ್ಲಿ) ಮತ್ತು ಕನಿಷ್ಠ 5 ಸೆಂ.ಮೀ. ಹಿಗ್ಗುವಿಕೆ ಇರಬೇಕು. ಬುಡಕಟ್ಟು ಪುರುಷರಿಗೆ ಕನಿಷ್ಠ ಎತ್ತರ 152 ಸೆಂ.ಮೀ. ಮತ್ತು ಎದೆ ಸುತ್ತಳತೆ 74 ಸೆಂ.ಮೀ. ಹಾಗೂ 5 ಸೆಂ.ಮೀ. ಹಿಗ್ಗುವಿಕೆ ಕಡ್ಡಾಯ.

ಮಹಿಳಾ ಅಭ್ಯರ್ಥಿಗಳು: ಕನಿಷ್ಠ ಎತ್ತರ 150 ಸೆಂ.ಮೀ. ಮತ್ತು ಕನಿಷ್ಠ 40 ಕೆ.ಜಿ. ತೂಕ ಇರಬೇಕು. ಬುಡಕಟ್ಟು ಮಹಿಳೆಯರಿಗೆ ಕನಿಷ್ಠ ಎತ್ತರ 145 ಸೆಂ.ಮೀ. ಮತ್ತು ಕನಿಷ್ಠ 38 ಕೆ.ಜಿ. ತೂಕ ಕಡ್ಡಾಯ.

ವೈದ್ಯಕೀಯ ಮಾನದಂಡಗಳು:

ಅಭ್ಯರ್ಥಿಗಳಿಗೆ ದೃಷ್ಟಿ ಸಾಮರ್ಥ್ಯ (6/6 ಅಥವಾ 6/9), ಶ್ರವಣ ಪರೀಕ್ಷೆ, ಹಾಗೂ ತಾಗು ಮಂಡಿ, ಬಾಗಿದ ಕಾಲುಗಳು, ಚಪ್ಪಟೆ ಪಾದ, ನರ ಊತ, ಮಾತನಾಡಲು ಅಥವಾ ಕೇಳಲು ತೊಂದರೆ ಮುಂತಾದ ದೈಹಿಕ ನ್ಯೂನತೆಗಳು ಇರಬಾರದು.

ಒಟ್ಟು 750 ಹುದ್ದೆಗಳಿದ್ದು, ಅದರಲ್ಲಿ 700 ನಾನ್-ಹೈದರಾಬಾದ್ ಕರ್ನಾಟಕ ಮತ್ತು 50 ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳು ಸೇರಿವೆ. ಜಿಲ್ಲಾವಾರು/ವೃತ್ತವಾರು ಹುದ್ದೆಗಳು ಹೀಗಿವೆ: ಬೆಂಗಳೂರು (70 – ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬನ್ನೇರುಘಟ್ಟ), ಬಳ್ಳಾರಿ (46), ಚಾಮರಾಜನಗರ (169 – ಬಂಡೀಪುರ, ಮಲೆ ಮಹಾದೇಶ್ವರ, BRT ಹುಲಿ ಸಂರಕ್ಷಿತ ಪ್ರದೇಶ), ಚಿಕ್ಕಮಗಳೂರು (56), ಧಾರವಾಡ (12), ಹಾಸನ (30), ಕೆನರಾ (60 – ಕಾರವಾರ, ಹಳಿಯಾಳ, ಯಲ್ಲಾಪುರ, ಶಿರಸಿ, ಹೊನ್ನಾವರ, ದಾಂಡೇಲಿ), ಕೊಡಗು (32), ಕಲಬುರ್ಗಿ (4), ಮಂಗಳೂರು (54), ಮೈಸೂರು (170), ಶಿವಮೊಗ್ಗ (38).

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 1 ರಿಂದ ಪ್ರಾರಂಭವಾಗಿ ಆಗಸ್ಟ್ 31 ರಂದು ಕೊನೆಗೊಳ್ಳುತ್ತದೆ. ಆಸಕ್ತರು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್ https://aranya.gov.in/ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆಗೆ ಪ್ರೋತ್ಸಾಹ: ‘ಸ್ಪರ್ಶ' ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ