LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ.!

ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ.!

ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಆಗಸ್ಟ್ 2 ರಂದು ನಡೆಸಿದ್ದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ಅಭ್ಯರ್ಥಿಗಳು ಪಡೆದ ಅಂಕಗಳನ್ನು ಪ್ರಕಟಿಸಲಾಗಿದೆ.

ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳು ಏನಾದರು ಇದ್ದರೆ ಆಗಸ್ಟ್ 17ರಂದು ಮಧ್ಯಾಹ್ನ 12.30ರೊಳಗೆ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ಪೊಲೀಸ್ ಇಲಾಖೆಯ ಉಳಿಕೆ ಮೂಲ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿರುವ ಬಗ್ಗೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ, ಪೊಲೀಸ್ ಇಲಾಖೆಯ ಉಳಿಕೆ ಮೂಲ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ದಿನಾಂಕ 02.08.2026 ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ದಿನಾಂಕ 03.08.2026 ರಂದು ಪ್ರಕಟಿಸಿ, ಸದರಿ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 06.08.2026 ಬೆಳಿಗ್ಗೆ 10.30 ರವರೆಗೆ ಕಾಲಾವಕಾಶ ನೀಡಲಾಗಿತ್ತು.

ಸಂಬಂಧ ಪ್ರಾಧಿಕಾರದಲ್ಲಿ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಗಳ ಮೂಲಕ ಪರಿಶೀಲಿಸಿ, ಪರಿಷ್ಕೃತ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ನಲ್ಲಿ ದಿನಾಂಕ 07.08.2026 ರಂದು ಪ್ರಕಟಿಸಲಾಗಿರುತ್ತದೆ.

ಅದರಂತೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 17.08.2026 ಮಧ್ಯಾಹ್ನ 12.30 ರೊಳಗೆ (https://cetonline.karnataka.gov.in/kea/) ಸಲ್ಲಿಸತಕ್ಕದ್ದು, ಪೂರಕ ದಾಖಲೆಗಳಿಲ್ಲದ ಹಾಗೂ ಕೀ ಉತ್ತರಗಳಿಗೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಹಂತದಲ್ಲಿ ಪರಿಗಣಿಸಲಾಗುವುದಿಲ್ಲ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭುವನೇಶ್ವರಿ ಯಂತ್ರದಿಂದ ಯಾವ ರೀತಿ ಸಕಲ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬಹುದು ಗೊತ್ತೇ ?ನೀವು ಸ್ವಂತ ಮನೆಯ ಬಗ್ಗೆ ಕನಸು ಕಾಣುತ್ತೀರ .? ಶಾಸಕ ಶ್ರೀನಿವಾಸ ಮಾನೆ ಏನು ಹೇಳಿದ್ದಾರೆ.?ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ.!ಕೆನರಾ ಬ್ಯಾಂಕ್‍ನಿಂದ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆ-ಕಿನ್ನರಿ ಬ್ರಹ್ಮಯ್ಯ ಅವರ ವಚನನಿಮಗೆ ಎಂದಾದರೂ ಬಿಕ್ಕಳಿಕೆ ಬಂದಿದೆಯಾ.? ಇರುವ ಪರಿಹಾರಗಳೇನು.ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 15-08-2026ಯಕ್ಷಣಿ ದೇವತೆಗಳ ಮಂತ್ರ ಮಹತ್ವ ತಿಳಿದು ನಿಮ್ಮ ಶತ್ರುಗಳ ವಿರುದ್ಧ ಜಯಶೀಲರಾಗಿ ಇಷ್ಟಾರ್ಥ ಕಾರ್ಯ ಸಿದ್ಧಿಗಾಗಿ ಯಕ್ಷಿಣಿ ಸಾಧನಾ ತಂತ್ರದಲ್ಲಿ ಅತೀಂದ್ರಿಯ ಸ್ತ್ರೀ ಶಕ್ತಿಗಳು⁣ನಮ್ಮೆಲ್ಲಾ ಓದುಗರಿಗೂ, ಜಾಹೀರಾತುದಾರರಿಗೂ-ದಶಗಣ ಸಿಂಗಿದೇವಯ್ಯ  ಅವರ ವಚನ