ಬೆಂಗಳೂರು: 2013ನೇ ಬ್ಯಾಚ್ನ IAS ಅಧಿಕಾರಿ ರಮ್ಯಾ ಎಸ್. ಅವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಇದಕ್ಕೂ ಮೊದಲು ಅವರು ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ರಮ್ಯಾ ಎಸ್. ಅವರ ವರ್ಗಾವಣೆ ಆದೇಶವನ್ನು ಕಳೆದ ತಿಂಗಳು SIR ಪ್ರಕ್ರಿಯೆಯ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿತ್ತು. ಇದೀಗ ಪರಿಷ್ಕೃತ ಆದೇಶದ ಮೂಲಕ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಚಿತ್ರದುರ್ಗದ ಜಿಲ್ಲಾಧಿಕಾರಿಯಾಗಿದ್ದ ಟಿ. ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸದ್ಯ ಅವರಿಗೆ ಯಾವುದೇ ಹೊಸ ಹುದ್ದೆ ನೀಡಲಾಗಿಲ್ಲ.