ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಗುವ ಲಕ್ಷಣಗಳು ಕಂಡುಬರುತ್ತಿವೆ. ದೆಹಲಿ ಪ್ರವಾಸ ಮುಗಿಸಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ, ನಾಳೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ.
ನಾಳೆ ನೂತನ ಸಚಿವರನ್ನು ಒಳಗೊಂಡ ಹೊಸ ಸಂಪುಟ ರಚನೆಯಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಶಾಸಕಾಂಗ ಪಕ್ಷದಲ್ಲಿ ಹಾಗೂ ಸಚಿವ ಆಕಾಂಕ್ಷಿಗಳಲ್ಲಿ ಹೊಸ ಸಂಚಲನ ಮೂಡಿದ್ದು, ಯಾರೆಲ್ಲಾ ಹೊಸದಾಗಿ ಸಂಪುಟ ಸೇರಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.