ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕೈಯಲ್ಲಿ ಜ್ಯೋತಿಯ ಹಿಡಿದು ಕತ್ತಲೆಯೆನಲೇತಕ್ಕೆ ?
ಪರುಷರಸ ಕೈಯಲ್ಲಿದ್ದು ಕೂಲಿಯ ಮಾಡಲೇತಕ್ಕೆ ?
ಕ್ಷುತ್ತು ನಿವೃತ್ತಿಯಾದವಂಗೆ ಕಟ್ಟೋಗರದ ಹೊರೆಯ ಹೊರಲೇತಕ್ಕೆ ?
ನಿತ್ಯ ಅನಿತ್ಯವ ತಿಳಿದು, ಮತ್ರ್ಯ ಕೈಲಾಸವೆಂಬುದು ಭಕ್ತರಿಗೆ ಯುಕ್ತಿಯಲ್ಲ.
ನಿಶ್ಚಯವ ತಾನರಿತು ಅತ್ತಣ ಇತ್ತಣ ಗೊತ್ತು ನಿಶ್ಚಯವಾಗಿ ನಿಂದಲ್ಲಿ,
ಆ ಬಚ್ಚಬಯಲ ಬೆಳಗ ನಿನ್ನ ನೀನೆ ನೋಡಿಕೊ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ
-ಮೋಳಿಗೆ ಮಹಾದೇವಿ