-ಬಸವಣ್ಣ ಅವರ ವಚನ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ದೂಷಕನವನೊಬ್ಬ ದೇಶವ ಕೊಟ್ಟಡೆ,
ಆಸೆಮಾಡಿ ಅವನ ಹೊರೆಯಲಿರಬೇಡ.
ಮಾದಾರ ಶಿವಭಕ್ತನಾದಡೆ,
ಆತನ ಹೊರೆಯಲು ಭೃತ್ಯನಾಗಿಪ್ಪುದು ಕರ ಲೇಸಯ್ಯಾ,
ತೊತ್ತಾಗಿಪ್ಪುದು ಕರ ಲೇಸಯ್ಯಾ.
ಕಾಡ ಸೊಪ್ಪು ತಂದು ಓಡಿನಲ್ಲಿ ಹುರಿದಿಟ್ಟು,
ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ.
-ಬಸವಣ್ಣ