-ರಾಯಸದ ಮಂಚಣ್ಣ ಅವರ ವಚನ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮರಾಳಂಗೆ ಹಾಲು ನೀರನೆರೆದಲ್ಲಿ
ನೀರನುಳುಹಿ ಹಾಲ ಕೊಂಬ ಭೇದವ ನೋಡಾ !
ಎಣ್ಣೆ ನೀರ ಕೂಡಿದಲ್ಲಿ ಅದು ತನ್ನಿಂದಲೆ ಬೆಳೆದು,
ಚೆನ್ನಾಗಿ ಉರಿಯದ ಭೇದವ ನೋಡಾ!
ಮಣ್ಣು ಹೊನ್ನಿನಲ್ಲಿ ಬೆಳೆದು, ತನ್ನ ತಪ್ಪಿಸಿಕೊಂಡು,
ಹೊನ್ನು ಬೆಲೆಯಾದ ಭೇದವ ನೋಡಾ !
ತನ್ನೊಳಗೆ ತಾನಿದು ತನ್ನನರಿಯದೆ,
ತೊಳಲುವ ಬಿನ್ನಾಣವ ನೋಡಾ !
ಚೆನ್ನಾಗಿ ನುಡಿವ ಅಣ್ಣಗಳ ಬಾಗಿಲಲ್ಲಿ ನಿಂದು,
ನಿಜವುಳ್ಳ ಅಣ್ಣಗಳ ಬಾಗಿಲಲ್ಲಿ ನಿಂದು, ಬಣ್ಣ ಗೆಟ್ಟವರ ಕಂಡು ಚುನ್ನವಾಡುತಿರ್ದ, ಜಾಂಬೇಶ್ವರಾ.
-ರಾಯಸದ ಮಂಚಣ್ಣ